ಬೆಂಗಳೂರು: ಬಿಜೆಪಿ ಯುವನಾಯಕ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮನೆಯ ಸದಸ್ಯನನ್ನು ಕಳೆದುಕೊಂಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗದ್ಗದಿತರಾದರು.
ಪ್ರಕರಣ ಸಂಬಂಧ ಈಗಾಗಲೇ 15 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ. ಅದು ಬಾರ್ಡರ್ ಜಿಲ್ಲೆ. ಹೀಗಾಗಿ ಕೇರಳಕ್ಕೆ ತಂಡ ಹೋಗಿದೆ. ಕೇರಳ ಪೊಲೀಸ್ ನಮ್ಮ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ಆಗಬೇಕು. ಕರ್ನಾಟಕ ಪೊಲೀಸರು ಕೇರಳದ ಪೊಲೀಸರ ಜೊತೆ ಮಾತಾಡ್ತಿದ್ದಾರೆ. ಸೂತಕದ ಮನೆಯಲ್ಲಿ ಏನು ಮಾಡಬಾರದಿತ್ತು ಎಂದರು.
ಸಿಎಂ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳೂರು ವಾತಾವರಣ ಶಾಂತವಾಗಿದೆ. ಅಲ್ಲಿನ ಜನ ಬುದ್ಧಿವಂತರು. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ. ಮತಾಂಧ ಶಕ್ತಿಗಳ ಮೇಲೆ ಅನುಮಾನ ಇದೆ. ಅಂತಹ ಶಕ್ತಿಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಕಾರ್ಯಕರ್ತರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆಕ್ರೋಶ ಇದೆ. ಪ್ರವೀಣ ಅಮೂಲ್ಯವಾದ ಆಸ್ತಿ. ಆಕ್ರೋಶನೂ ಹೊರ ಹಾಕಿದ್ದಾರೆ. ಜೊತೆಗೆ ಶಾಂತಿಯೂ ಕಾಪಾಡಿದ್ದಾರೆ. ಪೊಲೀಸರ ಭದ್ರತೆ ಮುಂದುವರಿಯಲಿದೆ. ನಾನು ಮಂಗಳೂರಿಗೆ ಹೋಗ್ತೀನಿ. ಶೀಘ್ರವೇ ಈ ಬಗ್ಗೆ ನಿರ್ಧಾರ ಮಾಡ್ತೀವಿ. ಜನರ ಆಕ್ರೋಶ ಇರೋದು ನಿಜ. ಜನರ ಆಕ್ರೋಶ ಅರ್ಥ ಆಗುತ್ತೆ. ಈ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತಗೋತೀವಿ ಎಂದು ತಿಳಿಸಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…