ಸವಣೂರು : ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಜತೆ ಕುಂಜಾಡಿಯಲ್ಲಿ ಮಾತುಕತೆ ನಡೆಸಿದರು.
ಮೊನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಆಜ್ಞೆ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಪ್ರವೀಣ್ ಅವರ ಸ್ವಗೃಹ ನಿರ್ಮಾಣದ ಕನಸನ್ನು ನನಸಾಗಿಸಲು ಪ್ರವೀಣ್ ಅವರ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ.
ನಳಿನ್ ತವರು ಮನೆಯಾದ ಸವಣೂರು ಸಮೀಪದ ಕುಂಜಾಡಿ ಮನೆಯಲ್ಲಿ ಪ್ರವೀಣ್ ನೆಟ್ಟಾರು ಕುಟುಂಬಸ್ಥರನ್ನು ಭೇಟಿ ಯಾಗಿದ್ದಾರೆ. ಪ್ರವೀಣ್ ಪತ್ನಿಗೆ ಸರಕಾರಿ ಉದ್ಯೋಗ ನೀಡಲು ಸಹಕರಿಸಿದ ಸಂಸದರಿಗೆ ಪ್ರವೀಣ್ ಕುಟುಂಬ ಧನ್ಯವಾದ ಸಮರ್ಪಿಸಿದೆ.
ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಶೇಖರ್ ಪೂಜಾರಿ,ರತ್ನಾವತಿ, ಪತ್ನಿ ನೂತನ,ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ,ಪ್ರಮುಖರಾದ ಆರ್.ಕೆ.ಭಟ್ ,ಸಹಜ್ ರೈ ಮೊದಲಾದವರಿದ್ದರು.
ಕುಂದಾಪುರ: ಬೆಂಗಳೂರಿನಲ್ಲಿ ಸ್ಕೂಟಿ ಹಾಗೂ ಟ್ಯಾಂಕರ್ ಅಪಘಾತ – ಬೈಂದೂರಿನ ಮಹಿಳೆ ಸಾವು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…