ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ.
ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಪೈಚಾರು ಸುಳಿವು ನೀಡಿದವರಿಗೆ 5 ಲಕ್ಷ ಹಣ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಇದೀಗ ಆರೋಪಿಯನ್ನು ಇಂದು ಬೆಳಿಗ್ಗೆ ಸಕಲೇಶಪುರದಲ್ಲಿ ಎನ್ಐಎ ಅರೆಸ್ಟ್ ಮಾಡಿದೆ.
2022 ಜೂನ್ 26 ರಂದು ನಡೆದಿದ್ದ ಬಿಜೆಪಿಯ ಯುವಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆಯ ಕೋಳಿ ಅಂಗಡಿ ಮುಚ್ಚಿ ಮನೆಗೆ ಹೊರಡುತ್ತಿದ್ದ ಸಮಯದಲ್ಲಿ ಬೈಕಿನಲ್ಲಿ ಬಂದ ಕಿಡೇಗಿಡಗಳು ಕೊಲೆ ಮಾಡಿದ್ದರು. ಘಟನೆ ಬಗ್ಗೆ ಇಡೀ ರಾಜ್ಯದಲ್ಲಿ ಆಕ್ರೋಶ ಕೇಳಿ ಬಂದ ಹಿನ್ನಲೆ ರಾಜ್ಯ ಸರಕಾರ ಎನ್ಐಎಗೆ ಪ್ರಕರಣದ ತನಿಖೆಗೆ ವಹಿಸಿತ್ತು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…