ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು – vishwanews24
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು
ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿಪಿಐ ಪಕ್ಷದ ಮುಖಂಡ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಪೋಷಣೆಯನ್ನು ನಿಗದಿತ ಸಮಯದಲ್ಲಿ ಸಲ್ಲಿಸದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಿದೆ.
ಕಾಸರಗೋಡು : ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು ; ಇನ್ನೋರ್ವ ಗಂಭೀರ – vishwanews24
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಮಹಮ್ಮದ್ ಇಕ್ಬಾಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಳಿಕ ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿಕೊಂಡ ಎನ್ಐಎ ತನಿಖಾ ತಂಡ ಇಕ್ಬಾಲ್ ಅವರನ್ನು ಬಂಧಿಸಿದ್ದು, ಜೈಲಿನಲ್ಲಿದ್ದಾರೆ
