ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾಯ್ಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿರುವ ಅವರು, ತನ್ನ ನೇತೃತ್ವದಲ್ಲಿನ ಸರ್ಕಾರ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವು ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದರು.
ಈ ನಡುವೆ ಇಂದು ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ ಅವರಿಗೆ ದ.ಕ. ಜಿಲ್ಲಾ ಭೇಟಿ ಸದ್ಯಕ್ಕೆ ಮುಂದೂಡುವುದು ಸೂಕ್ತ ಎಂದು ಎಡಿಜಿಪಿ ಅಲೋಕ್ಕುಮಾರ್ ಅವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸದ್ಯಕ್ಕೆ ಸುಳ್ಯಕ್ಕೆ ಭೇಟಿ ನೀಡದಿರುವುದೇ ಉತ್ತಮ. ಪ್ರವೀಣ್ ಹತ್ಯೆ ಪ್ರಕರಣದ ನೈಜ ಆರೋಪಿಗಳ ಬಂಧನವಾದ ಬಳಿಕವೇ ಭೇಟಿ ನೀಡುವುದು ಒಳಿತು ಎಂಬುದಾಗಿ ಅಲೋಕ್ಕುಮಾರ್ ಅವರು ಸಿಎಂಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…