ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ.
ಪ್ರವೀಣ್ ನೆಟ್ಟಾರ್ ಪ್ರಾಣಿ ಪ್ರಿಯರಾಗಿದ್ದರು. ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ಗುಣ ಹೊಂದಿದ್ದರು. ಅಂತಹ ಪ್ರವೀಣ್ ತಮ್ಮ ಮನೆಯಲ್ಲಿ ಶ್ವಾನವೊಂದನ್ನು ಸಾಕಿದ್ದರು. ಅತ್ಯಂತ ಅಕ್ಕರೆಯಿಂದ ಸಾಕಿದ್ದ ಶ್ವಾನ ಇದೀಗ ಮೃತಪಟ್ಟಿದೆ. ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಈ ಶ್ವಾನ ಅನಾರೋಗ್ಯದಿಂದ ನರಳುತ್ತಿತ್ತು ಎನ್ನಲಾಗುತ್ತಿದೆ. ಇದೀಗ ಆ ಶ್ವಾನ ಸಾವನ್ನಪ್ಪಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಿಲ್ಲವೆರ್ ಪೇಜ್ ನಲ್ಲಿ ಪ್ರಕಟಿಸಲಾಗಿದೆ.
ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ ಮರಿಗಳನ್ನು ರಕ್ಷಿಸಿದ್ದರು. ಈ ಕುರಿತಂತೆ ಅವರೇ ಜಾಲತಾಣದಲ್ಲಿ ಫೋಟೋ ಸಹಿತ ಮಾಹಿತಿ ಪ್ರಕಟಿಸಿದ್ದರು. ಒಂದು ಜೀವ ಉಳಿಸಿದ ಸಾರ್ಥಕತೆ ಎಂದು ಹೇಳಿಕೊಂಡಿದ್ದರು. ಪ್ರಾಣಿಗಳ ಮೇಲೆ ಪ್ರವೀಣ್ ಅವರಿಗೆ ಅಷ್ಟೊಂದು ಪ್ರೀತಿ ಇತ್ತು ಎನ್ನುವುದು ಇದರಿಂದ ತಿಳಿಯಬಹುದಾಗಿದೆ.
ಮಹಾಲಕ್ಷ್ಮೀ ಬ್ಯಾಂಕಿನ ವತಿಯಿಂದ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಸನ್ಮಾನ..
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…