ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕುಮಾರ್ ಸಾವನಪ್ಪಿದ್ದರು.
ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಈಗಾಗಲೇ ಹಲವರನ್ನು ಎನ್ಐಎ ಬಂಧಿಸಿ ವಿಚಾರಣೆ ನಡೆಸುತ್ತಿದ್ದೆ. ಇನ್ನು ಕೆಲವು ಆರೋಪಿಗಳ ಬಂಧನವಾಗದ ಹಿನ್ನಲೆ ಈ ಸಂಬಂಧ ಎನ್ಐಎ ರಿವಾರ್ಡ್ ವಾಂಟೆಡ್ ನೋಟಿಸ್ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಅಲ್ಲದೆ ಪಿಎಫ್ಐ ನ ಸದಸ್ಯರಾದ ಮತ್ತಿಬ್ಬರು ಆರೋಪಿಗಳು ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರೆಹಮಾನ್ ಅವರ ಮಾಹಿತಿಗೂ 2 ಲಕ್ಷ ಬಹುಮಾನ ಘೋಷಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…