ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸರ್ಕಾರ ನೊಂದವರ ಜತೆ ಸದಾ ಇರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಪ್ರಚೋದನೆ ನೀಡುವ ಸಂಘಟನೆಗಳ ನಿಷೇಧ ಮಾಡುವ ಬಗ್ಗೆ ಸಿಎಂ ಜತೆ ಮಾತನಾಡುತ್ತೇನೆ. ಮೋದಿ, ಯೋಗಿ ಮಾಡೆಲ್ ನೀಡಿರುವುದು ಬಿಜೆಪಿಯೇ. ಕಾಂಗ್ರೆಸ್ ಅಥವಾ ಬೇರೆಯವರು ಇದನ್ನ ಮಾಡಿಲ್ಲ. ಸಂದರ್ಭ ಬಂದರೆ ಮೋದಿ, ಯೋಗಿ ಮಾಡೆಲ್ ಗಿಂತಲೂ ಮುಂದೆ ಹೋಗಿ ಸರ್ಜಿಕಲ್ ಸ್ಟ್ರೈಕ್ ಮಾಡಲು ಸಿದ್ಧ ಎಂದರು.
ನಮ್ಮ ವಿಚಾರಧಾರೆಗಳನ್ನು ಯಾವತ್ತೂ ಹತ್ಯೆ ಮಾಡಲು ಸಾಧ್ಯವಿಲ್ಲ. ಕಾರ್ಯಕರ್ತರ ಭಾವನೆಗಳ ಜತೆ ನಾವೂ ಇದ್ದೇವೆ. ಸಂದರ್ಭ ಬಂದರೆ ಬೀದಿಗಿಳಿದು ಹೋರಾಡಲು ಸಿದ್ಧ. ನಾವೂ ಕೂಡ ಬೀದಿಯಲ್ಲಿದ್ದೇ ಹೋರಾಟ ಮಾಡಿ ಬಂದವರು. ಸಂದರ್ಭ ಬಂದರೆ ಕಾರ್ಯಕರ್ತರ ಜತೆ ಬೀದಿಗಿಳಿಯುತ್ತೇವೆ ಎಂದು ಹೇಳಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…