ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಝಾಕೀರ್ ಸವಣೂರು (35) ಜಾಮೀನು ಪಡೆದ ಆರೋಪಿ. ಈತ ಪ್ರಕರಣದ 18ನೇ ಆರೋಪಿಯಾಗಿದ್ದ.
ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬನು. ಈತನನ್ನು 2022 ಜು.28 ರಂದು ಬೆಳ್ಳಾರೆಯ ಶಫೀಕ್ನೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಹಿಂದೆ ಪ್ರಕರಣದ 26ನೇ ಆರೋಪಿಯಾಗಿರುವ ಸೋಮವಾರ ಪೇಟೆಯ ಎಚ್.ವೈ. ರಿಯಾಜ್ ಎಂಬಾತನಿಗೆ ಜಾಮೀನು ಲಭಿಸಿತ್ತು. ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ.
ಏನಿದು ಪ್ರಕರಣ?
2022 ಜುಲೈ 26 ರಂದು ಬೆಳ್ಳಾರೆಯ ಅಕ್ಷಯ್ ಚಿಕನ್ ಸೆಂಟರ್ ಎದುರು ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣವನ್ನು ಎನ್ ಐಎ ಗೆ ವಹಿಸಲಾಗಿತ್ತು. 26 ಮಂದಿಯನ್ನು ತನಿಖಾಧಿಕಾರಿಗಳು ಬಂಧಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…