ಕಾರ್ಕಳ: ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು , ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಹೇಳಿದ್ದಾರೆ.
ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು, ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಅವರೂ ಈ ರೀತಿ ತರಾತುರಿಯಿಂದ ಕಾರು ಹತ್ತಿ ಒಂದು ರೀತಿ ಪಲಾಯನಗೈದಂತೆ ಹೋಗುವುದು ಸರಿಯಲ್ಲ. ಜಿಲ್ಲಾಉಸ್ತುವಾರಿಯಾಗಿ ಆಕ್ರೋಶಿತ ಕಾರ್ಯಕರ್ತರಿಗೆ ಸಮಾಧಾನ ಪಡಿಸಿ ವಾತಾವರಣ ತಿಳಿಗೊಳಿಸುವ ಜವಾಬ್ದಾರಿಯುತ ನಡೆಯನ್ನು ಸುನೀಲ್ ಅವರಿಂದ ನಿರೀಕ್ಷಿಸಿತ್ತು.ಆದರೆ ನಿರೀಕ್ಷೆ ಸುಳ್ಳಾಯಿತು,ಸಚಿವರಾದಾಗ ಏನು ಹಿಂದುತ್ವ ಮತ್ತು ಅಧಿಕಾರ ಇವೆರಡರ ಮಧ್ಯೆ ನನಗೆ ಆಯ್ಕೆ ನೀಡಿದರೆ ಹಿಂದುತ್ವವೇ ಮುಖ್ಯ ಎನ್ನುವಂತ ಮಾತನ್ನು ಹೇಳಿದ್ದರು ಅದು ಕೇವಲ ಬಡಾಯಿ ಮಾತುಗಳು ಅಷ್ಟೇ ಎಂದು ಸಾಬೀತಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಕೂಡಲೇ ಸುನೀಲ್ ಕುಮಾರ್ ಅವರು ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…