ಬೆಂಗಳೂರು: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ – Vishwanews24
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ..
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…