ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆಯಿಂದಾಗಿ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪುತ್ತೂರು, ಸುಳ್ಯ, ಕಡಬದಲ್ಲಿ ಬುಧವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪುತ್ತೂರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗಿರೀಶ್ ನಂದನ್ ಬುಧವಾರ ಆದೇಶ ಹೊರಡಿಸಿದ್ದು, ಜುಲೈ 27 ರಂದು ಬೆಳಿಗ್ಗೆ 6 ರಿಂದ ಜುಲೈ 28 ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.
ಇದನ್ನೂ ಓದಿ : ಮೋದಿ, ಯೋಗಿಯ ಮಾದರಿಯಲ್ಲಿ ಸ್ಥೈರ್ಯವಾಗಲೀ, ಧೈರ್ಯವಾಗಲೀ ಬೊಮ್ಮಾಯಿ ಸರ್ಕಾರಕ್ಕಿಲ್ಲ..
ಬಂಟ್ವಾಳದ ಬಿಸಿ ರೋಡ್ನಲ್ಲಿ ಹಿಂದೂ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಮನವಿ ಮಾಡಿದ್ದಾರೆ. ಇನ್ಸ್ಪೆಕ್ಟರ್ ವಿವೇಕಾನಂದ , ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇದಕ್ಕೂ ಮುನ್ನ ಜಿಲ್ಲೆಯ ಕಡಬ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಬುಧವಾರ ಬಂದ್ಗೆ ಕರೆ ನೀಡಿತ್ತು.
ಬಂದ್ ಕರೆಗೆ ಸ್ಪಂದಿಸಿ ಇಂದು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಸಂಸ್ಥೆಗಳು ವ್ಯಾಪಾರ ವಹಿವಾಟು ನಡೆಸಲು ಮುಚ್ಚಿದ್ದವು. ಪುತ್ತೂರಿನ ಲೈನ್ ಜಂಕ್ಷನ್ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಾಟ ನಡೆದಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿಯಾಗಿರುವ ಪ್ರವೀಣ್ ಅವರು ಎಂದಿನಂತೆ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತನ್ನ ಚಿಕನ್ ಸೆಂಟರ್ ಅನ್ನು ಮುಚ್ಚುವ ತಯಾರಿಯಲ್ಲಿದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ :ಪ್ರವೀಣ್ ನೆಟ್ಟಾರ್ ಹತ್ಯೆ- ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಿ ಎಂದ ಪ್ರವೀಣ್ ಸೋದರ ಮಾವ ಲೋಕೆಶ್ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…