ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 26 ಮಂದಿಯನ್ನು ಎನ್ಐಎ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣದ 26ನೇ ಆರೋಪಿಯಾಗಿರುವ ಕೊಡಗು ಸೋಮವಾರಪೇಟೆ ಮೂಲದ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಹಿನ್ನೆಲೆಯಲ್ಲಿ ಬಂಧಿಯಾಗಿದ್ದ. ಮುಸ್ತಫಾ ಪೈಚಾರ್ ಈ ಕೃತ್ಯದ ಮುಖ್ಯ ರೂವಾರಿ ಆಗಿದ್ದ ಎಂದು ಎನ್ಐಎ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿತ್ತು. ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಲಾಗಿತ್ತು. ರಿಯಾಝ್ ಎಂಬಾತ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದು ಬಹಿರಂಗವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…