Featured

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ , ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು – Vishwanews24

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ

ದಕ‌ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹಿಂದೂ ಸಂಘಟನೆಯ ಧುರೀಣ ಪ್ರವೀಣ್ ಹತ್ಯೆಗೈದಿರುವ ಘಟನೆಯ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ .

ಇಂಥಹ ಹೇಯಕೃತ್ಯ ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದಾಗಿದೆ . ಮೃತ ಪ್ರವೀಣನ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು ಆತನ‌ ಕುಟುಂಬಸ್ಥರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿರುವ ಶ್ರೀಗಳು , ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ .

ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು
ಪ್ರವೀಣ ನ‌ಹತ್ಯೆಯಿಂದ ನಾಡಿನ ಸಹಸ್ರಾರು ಹಿಂದೂ ಯುವ ಕಾರ್ಯಕರ್ತರು ಆಕ್ರೋಶ ಉಲ್ಬಣಿಸಲು ಕಾರಣವಾಗುತ್ತಿದೆ . ಇತ್ತೀಚೆಗಷ್ಟೆ ಹರ್ಷನ ಹತ್ಯೆಯ ದುಃಖ ನೋವಿನಿಂದ ಹೊರಬರುವ ಹೊತ್ತಿಗೇ ಇನ್ನೊಬ್ಬ ತರುಣನ ಕೊಲೆಯಾಗಿರೋದು ಸಹನೆಯ ಕಟ್ಟೆ ಒಡೆಯುವಷ್ಟು ದುಃಖ ಆಕ್ರೋಶ ತರಿಸೋದು ಸಹಜವೇ ಆಗಿದ್ದರೂ ಯಾರೊಬ್ಬರೂ ಧೈರ್ಯ ಕಳಕೊಳ್ಳಬಾರದು . ಸಂಯಮವನ್ನು ಒಗ್ಗಟ್ಟನ್ನು ಕಾಯ್ದುಕೊಂಡು ಕೆಲಸ ಮಾಡಬೇಕಾಗಿದೆ . ನಾವುಗಳೂ ತಮ್ಮೆಲ್ಲರ ನೋವಿನಲ್ಲಿ ಸಹಾನುವರ್ತಿಗಳು ಎಂದು ಶ್ರೀಗಳು ತಿಳಿಸಿದ್ದಾರೆ

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

4 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

4 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

4 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago