ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿಸಿರುವ ಝಾಕೀರ್ ಹಾಗೂ ಶಫೀಕ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದು ಇಂದು ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಜೊತಗೆ ಝಾಕೀರ್ ಗೆ ದಿನಾಂಕ 12-08- 2022ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಪೊಲೀಸರ ಕೋರಿಕೆಯ ಮೇರೆಗೆ ಶಫೀಕ್ ನನ್ನು ದಿನಾಂಕ 06-08-2022 ತನಕ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಪಿ.ಎಫ್. ಐ ಸಂಘಟನೆ ಹಾಗೂ ಎಸ್ಡಿಪಿಐ ಪಕ್ಷದ ಕಾರ್ಯಕರ್ತರಾಗಿದ್ದಾರೆ . ಅಬ್ದುಲ್ ಹ್ಯಾರಿಸ್ ಈ ಹಿಂದೆ ವಿದೇಶದಲ್ಲಿದ್ದು ಸದ್ಯ ಊರಿನಲ್ಲೇ ಇದ್ದ. ಶೇಕ್ ಸದ್ದಾಮ್ ಹುಸೇನ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಹೊಂದಿದ್ದಾನೆ.ಸದ್ದಾಂ ಹುಸೇನ್ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಬೂತ್ ಸಮಿತಿಯ ಅಧ್ಯಕ್ಷನಾಗಿದ್ದಾನೆ. ಅಬ್ದುಲ್ ಹ್ಯಾರಿಸ್ ಕೋಶಾಧಿಕಾರಿಯಾಗಿ ಗುರುತಿಸಿಕೊಂಡಿದ್ದಾನೆ.
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…