ಉಡುಪಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ಐಎ ತನಿಖೆ ಚುರುಕುಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆಯಬೇಕು. ಹಂತಕರನ್ನು ಶೀಘ್ರ ಬಂಧಿಸಬೇಕು. ಬೆಂಗಳೂರಿನಲ್ಲೂ ಎನ್ಐಎ ಕಚೇರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲಿ ಕೇರಳ ಮಾದರಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿದೆ. ಕುತ್ತಿಗೆ, ತಲೆ ಕಡಿಯುತ್ತಿದ್ದಾರೆ. ರುದ್ರೇಶ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಇದೇ ಮಾದರಿ ಅನುಸರಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಮನವರಿಕೆ ಮಾಡಿದರು.
ಹಂತಕರಿಗೆ ತರಬೇತಿ ಎಲ್ಲಿ ಸಿಗುತ್ತಿದೆ ಎಂಬುವುದು ಕೂಡಾ ತನಿಖೆ ಆಗಬೇಕು. ಇದಕ್ಕೆ ಹಣಕಾಸು ನೆರವು ನೀಡುವವರನ್ನು ಪತ್ತೆ ಮಾಡಿ ಇದನ್ನೂ ತನಿಖೆ ಮಾಡಬೇಕು ಎಂದು ಈ ವೇಳೆ ಒತ್ತಾಯಿಸಿದರು.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…