Featured

ಪ್ರವೀಣ್‌ ಹತ್ಯೆ ಪ್ರಕರಣ: NIA ದಾಳಿ ವೇಳೆ ಮದ್ದು ಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ – Vishwanews24

ಪ್ರವೀಣ್‌ ಹತ್ಯೆ ಪ್ರಕರಣ: NIA ದಾಳಿ ವೇಳೆ ಮದ್ದು ಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಶ್‌ ಸೋನಾವಣೆ ಅಧಿಕೃತ ಪಡಿಸಿದ್ದಾರೆ.

ದಿಢೀರ್‌ ಆಗಿ ನಡೆದ ದಾಳಿ ಇದಾಗಿದೆ. ಪ್ರವೀಣ್‌ ಹತ್ಯಾ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಕ್ರಿಯ ಸದಸ್ಯರಾಗಿರುವ ಆರೋಪಿಗಳು ಸಮಾಜದ ಒಂದು ವರ್ಗದ ಸದಸ್ಯರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ದೊಡ್ಡ ಪಿತೂರಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಯೋಜಿಸಿದ್ದಾರೆ ಮತ್ತು ಮಾಡಿದ್ದಾರೆ ಎಂದು ಎನ್ ಐ ಎ ತನಿಖೆ ಬಳಿಕ ತಿಳಿಸಿದೆ‌.

ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ಸೆ.6 ರಂದು ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು, ಬಳಸಿದ ಮದ್ದುಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು, ನಗದು, ದೋಷಾರೋಪಣೆ ದಾಖಲೆಗಳು, ಕರಪತ್ರಗಳು ಮತ್ತು ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ..ಆರೋಪಿ ಶಾಲಾ ಬಸ್ ಚಾಲಕನಿಗೆ ಜೈಲು ಶಿಕ್ಷೆ, ದಂಡ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago