ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಸಿಎಂ ಈ ವಿಷಯ ಪ್ರಕಟಿಸಿದ್ದಾರೆ.
ಒಬ್ಬ ಅತ್ಯಂತ ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ. ಮಾತುಗಳಲ್ಲಲ್ಲ ಮನಸ್ಸಲ್ಲೂ ಆಕ್ರೋಶವಿದೆ. ಹರ್ಷ ಕೊಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಆಗಿರುವುದು ಮನಸಿಗೆ ಘಾಸಿ ಮಾಡಿದೆ. ರಾಜ್ಯಾಧ್ಯಕ್ಷರು ಪ್ರವೀಣ್ ಮನೆಗೆ ತೆರಳಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ ಎಂದು ಸಿಎಂ ವಿವರಿಸಿದರು.
ಒಂದು ಕಡೆ ಕಾರ್ಯಕರ್ತನ ಕೊಲೆಯಾಗಿದೆ. ಇನ್ನೊಂದೆಡೆ ನನ್ನ ಸರ್ಕಾರಕ್ಕೆ ನಾಳೆ ಒಂದು ವರ್ಷ, ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಜನೋತ್ಸವ ನಡೆಸಲಿದ್ದುದರ ಉದ್ದೇಶ ಜನಪರವಾಗಿ ಏನು ಕೆಲಸ ಮಾಡಿದ್ದೇವೆ ಅದನ್ನು ಜನತೆಗೆ ತಿಳಿಸುವುದಾಗಿತ್ತು. ಆದರೆ ಈ ಸಂದರ್ಭದಲ್ಲಿ ಜನೋತ್ಸವ ನಡೆಸದಿರಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.
ಜನರಲ್ಲಿ ಜನೋತ್ಸವದಿಂದ ಆತ್ಮವಿಶ್ವಾಸ ಮೂಡಿ ಬರುವ ದಿನಗಳಲ್ಲಿ ಭರವಸೆ ಮೂಡಿಸಲು ಉದ್ದೇಶ ಇರಿಸಿಕೊಳ್ಳಲಾಗಿತ್ತೇ ವಿನಹ ಇದು ಸಂಭ್ರಮಿಸಲು ಅಲ್ಲ. ನಾನು ಇಂದು ಇಡೀ ದಿನ ಬೇರೆ ಕಾರ್ಯಕ್ರಮಗಳಲ್ಲಿದ್ದರೂ ಮನಸಿಗೆ ಶಾಂತಿ ಇರಲಿಲ್ಲ. ಪ್ರವೀಣ್ ತಾಯಿ, ಅವರ ಮನೆಯವರು, ಹರ್ಷನ ತಾಯಿ ಆಕ್ರಂದನ ನೋಡಿ ದೊಡ್ಡಬಳ್ಳಾಪುರದ ಜನೋತ್ಸವ ಕಾರ್ಯಕ್ರಮ ಹಾಗೂ ವಿಧಾನಸೌಧದಲ್ಲಿನ ಕಾರ್ಯಕ್ರಮ ಕೂಡ ರದ್ದು ಮಾಡಿದ್ದೇವೆ. ಆದರೆ ಬಡಜನರಿಗಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ಗುರುವಾರ ಸುದ್ದಿಗೋಷ್ಠಿ ಮೂಲಕ ತಿಳಿಸಲಿದ್ದೇನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…