Featured

ಪ್ರವೀಣ್ ಹತ್ಯೆ ಹಿನ್ನೆಲೆ – ಸರ್ಕಾರದ ಜನೋತ್ಸವ ರದ್ದು :  ಸಿಎಂ ಘೋಷಣೆ -Vishwanews24

ಪ್ರವೀಣ್ ಹತ್ಯೆ ಹಿನ್ನೆಲೆ – ಸರ್ಕಾರದ ಜನೋತ್ಸವ ರದ್ದು;  ಸಿಎಂ ಘೋಷಣೆ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಸಿಎಂ ಈ ವಿಷಯ ಪ್ರಕಟಿಸಿದ್ದಾರೆ.

ಒಬ್ಬ ಅತ್ಯಂತ ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ. ಮಾತುಗಳಲ್ಲಲ್ಲ ಮನಸ್ಸಲ್ಲೂ ಆಕ್ರೋಶವಿದೆ. ಹರ್ಷ ಕೊಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಆಗಿರುವುದು ಮನಸಿಗೆ ಘಾಸಿ ಮಾಡಿದೆ. ರಾಜ್ಯಾಧ್ಯಕ್ಷರು ಪ್ರವೀಣ್ ಮನೆಗೆ ತೆರಳಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ ಎಂದು ಸಿಎಂ ವಿವರಿಸಿದರು.

ಒಂದು ಕಡೆ ಕಾರ್ಯಕರ್ತನ ಕೊಲೆಯಾಗಿದೆ. ಇನ್ನೊಂದೆಡೆ ನನ್ನ ಸರ್ಕಾರಕ್ಕೆ ನಾಳೆ ಒಂದು ವರ್ಷ, ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಜನೋತ್ಸವ ನಡೆಸಲಿದ್ದುದರ ಉದ್ದೇಶ ಜನಪರವಾಗಿ ಏನು ಕೆಲಸ ಮಾಡಿದ್ದೇವೆ ಅದನ್ನು ಜನತೆಗೆ ತಿಳಿಸುವುದಾಗಿತ್ತು. ಆದರೆ ಈ ಸಂದರ್ಭದಲ್ಲಿ ಜನೋತ್ಸವ ನಡೆಸದಿರಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.

ಜನರಲ್ಲಿ ಜನೋತ್ಸವದಿಂದ ಆತ್ಮವಿಶ್ವಾಸ ಮೂಡಿ ಬರುವ ದಿನಗಳಲ್ಲಿ ಭರವಸೆ ಮೂಡಿಸಲು ಉದ್ದೇಶ ಇರಿಸಿಕೊಳ್ಳಲಾಗಿತ್ತೇ ವಿನಹ ಇದು ಸಂಭ್ರಮಿಸಲು ಅಲ್ಲ. ನಾನು ಇಂದು ಇಡೀ ದಿನ ಬೇರೆ ಕಾರ್ಯಕ್ರಮಗಳಲ್ಲಿದ್ದರೂ ಮನಸಿಗೆ ಶಾಂತಿ ಇರಲಿಲ್ಲ. ಪ್ರವೀಣ್ ತಾಯಿ, ಅವರ ಮನೆಯವರು, ಹರ್ಷನ ತಾಯಿ ಆಕ್ರಂದನ ನೋಡಿ ದೊಡ್ಡಬಳ್ಳಾಪುರದ ಜನೋತ್ಸವ ಕಾರ್ಯಕ್ರಮ ಹಾಗೂ ವಿಧಾನಸೌಧದಲ್ಲಿನ ಕಾರ್ಯಕ್ರಮ ಕೂಡ ರದ್ದು ಮಾಡಿದ್ದೇವೆ. ಆದರೆ ಬಡಜನರಿಗಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ಗುರುವಾರ ಸುದ್ದಿಗೋಷ್ಠಿ ಮೂಲಕ ತಿಳಿಸಲಿದ್ದೇನೆ.

 

 

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

5 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

8 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

10 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

11 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

11 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

12 hours ago