ಪ್ರವೀಣ್ ​ಹಾಗೂ ಫಾಜಿಲ್​ ಹತ್ಯೆ ಆರೋಪಿಗಳಿಗೆ ಶೀಘ್ರವೇ ಕಾನೂನಿನ ಕುಣಿಕೆ , ಶಿಕ್ಷಿಸದೆ ಬಿಡುವುದಿಲ್ಲ:  ಆರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

ಪ್ರವೀಣ್ ​ಹಾಗೂ ಫಾಜಿಲ್​ ಹತ್ಯೆ ಆರೋಪಿಗಳಿಗೆ ಶೀಘ್ರವೇ ಕಾನೂನಿನ ಕುಣಿಕೆ , ಶಿಕ್ಷಿಸದೆ ಬಿಡುವುದಿಲ್ಲ:  ಆರಗ ಜ್ಞಾನೇಂದ್ರ

ಬೆಂಗಳೂರು: ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ಫಾಜಿಲ್ ಹತ್ಯೆಯ ಹಿಂದೆ ಇರುವ ಆರೋಪಿಗಳ ಜಾಡು ಹಿಡಿದಿರುವ ಪೊಲೀಸರು, ಅಪಾದಿತರರನ್ನು ಶೀಘ್ರದಲ್ಲಿಯೇ ಕಾನೂನಿನ ಕುಣಿಕೆಗೆ ತರಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಇಂದು ಮಾತನಾಡಿದ ಸಚಿವರು, ಪ್ರವೀಣ್ ಹತ್ಯೆ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದನ್ನು ಖಚಿತ ಪಡಿಸಿದ್ದಾರೆ. ಕೃತ್ಯಕೆ ಸಹಕರಿಸಿದವರ ಬಂಧನವಾಗಿದೆ. ಹತ್ಯೆ ಮಾಡಿದವರ ಬಂಧನ ಶೀಘ್ರದಲ್ಲಿಯೇ ನಡೆಯಲಿದೆ.

ಬೈಂದೂರು ಭಾರಿ ಮಳೆ: ನೀರಿನ ರಭಸಕ್ಕೆ ಕೊಚ್ಚಿ ಹೋದ ದೋಣಿಗಳು – VIshwanews24

ಅಮಾನವೀಯ ಕೃತ್ಯ ನಡೆಸಿದವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಆದರೆ ಯಾರನ್ನೇ ವಿನಾಕಾರಣವಾಗಿ ಬಂಧಿಸಿಲ್ಲ ಎಂದರು. ಈ ಹಂತದಲ್ಲಿ ಹೆಚ್ಚೇನೂ ಹೇಳಲು ಇಚ್ಛಿಸುವುದಿಲ್ಲ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಮಸೂದ್ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಹಾಗೂ ಅಪರಾಧಿಗಳನ್ನು ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕಾಪು : ಪ್ರತೀ ವರ್ಷ ಜೀವಂತ ನಾಗರ ಹಾವಿಗೆ ತನು ಎರೆದು ನಾಗರ ಪಂಚಮಿ ಆಚರಿಸುವ ಮಜೂರು ಗೋವರ್ಧನ‌ ಭಟ್ – Vishwanews24

Leave a Reply