ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಾರಣಾಂತಿಕ ವಾಗಿ ಹಲ್ಲೆಗೊಳಗಾದ ವ್ಯಕ್ತಿಯನ್ನು ಇಮ್ತಿಯಾಜ್ (30) ಎಂದು ಗುರುತಿಸಲಾಗಿದೆ. ಈತ ಮೂಡಬಿದ್ರೆಯ ನಡೆದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಎಂದು ಹೇಳಲಾಗಿದೆ.
ಮೂಡಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ ಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 6.30ಕ್ಕೆ ಇನ್ನೋವಾ ಕಾರಿನಲ್ಲಿ ಬಂದ ತಂಡ ಇಮ್ತಿಯಾಜ್ (30) ಎಂಬಾತನ ಮೇಲೆ ತಲವಾರಿನಿಂದ ಕಡಿದು ಪರಾರಿಯಾಗಿದೆ.
ಇಮ್ತಿಯಾಜ್ ಗಂಟಾಲ್ ಕಟ್ಟೆಯಲ್ಲಿ ಹೊಟೇಲ್ ಹೊಂದಿದ್ದು, ಇನ್ನೋವಾದಲ್ಲಿ ಬಂದಿದ್ದ ಯುವಕರು ಬೆಳಗ್ಗೆ ಚಹಾ ಕುಡಿಯಲೆಂದು ಹೊಟೇಲ್ ಒಳಗೆ ಬಂದಿದ್ದರು. ಚಹಾಕ್ಕೆಂದು ಇಮ್ತಿಯಾಜ್ ಒಳಹೋದಾಗಲೇ ತಲವಾರಿನೊಂದಿಗೆ ನುಗ್ಗಿದ ತಂಡ ಆತನ ತಲೆ ಮತ್ತು ಕಾಲಿಗೆ ಕಡಿದು ಪರಾರಿಯಾಗಿದೆ.
ಗಂಭೀರವಾಗಿ ಹಲ್ಲೆಗೊಳಗಾದ ಇಮ್ತಿಯಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಇಮ್ತಿಯಾಜ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿ ಎನ್ನಲಾಗುತ್ತಿದ್ದು ಪ್ರತೀಕಾರಕ್ಕಾಗಿ ಕೊಲೆ ಯತ್ನ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು ಎರಡು ವರ್ಷಗಳ ಹಿಂದೆ ಮೂಡುಬಿದ್ರೆ ಪೇಟೆಯಲ್ಲಿ ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ಕಡಿದು ಹತ್ಯೆ ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನವನ್ನೂ ಸೃಷ್ಟಿ ಮಾಡಿತ್ತು.
ಜಾಹಿರಾತು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…