ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಾರಣಾಂತಿಕ ವಾಗಿ ಹಲ್ಲೆಗೊಳಗಾದ ವ್ಯಕ್ತಿಯನ್ನು ಇಮ್ತಿಯಾಜ್ (30) ಎಂದು ಗುರುತಿಸಲಾಗಿದೆ. ಈತ ಮೂಡಬಿದ್ರೆಯ ನಡೆದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಎಂದು ಹೇಳಲಾಗಿದೆ.
ಮೂಡಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ ಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 6.30ಕ್ಕೆ ಇನ್ನೋವಾ ಕಾರಿನಲ್ಲಿ ಬಂದ ತಂಡ ಇಮ್ತಿಯಾಜ್ (30) ಎಂಬಾತನ ಮೇಲೆ ತಲವಾರಿನಿಂದ ಕಡಿದು ಪರಾರಿಯಾಗಿದೆ.
ಇಮ್ತಿಯಾಜ್ ಗಂಟಾಲ್ ಕಟ್ಟೆಯಲ್ಲಿ ಹೊಟೇಲ್ ಹೊಂದಿದ್ದು, ಇನ್ನೋವಾದಲ್ಲಿ ಬಂದಿದ್ದ ಯುವಕರು ಬೆಳಗ್ಗೆ ಚಹಾ ಕುಡಿಯಲೆಂದು ಹೊಟೇಲ್ ಒಳಗೆ ಬಂದಿದ್ದರು. ಚಹಾಕ್ಕೆಂದು ಇಮ್ತಿಯಾಜ್ ಒಳಹೋದಾಗಲೇ ತಲವಾರಿನೊಂದಿಗೆ ನುಗ್ಗಿದ ತಂಡ ಆತನ ತಲೆ ಮತ್ತು ಕಾಲಿಗೆ ಕಡಿದು ಪರಾರಿಯಾಗಿದೆ.
ಗಂಭೀರವಾಗಿ ಹಲ್ಲೆಗೊಳಗಾದ ಇಮ್ತಿಯಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಇಮ್ತಿಯಾಜ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿ ಎನ್ನಲಾಗುತ್ತಿದ್ದು ಪ್ರತೀಕಾರಕ್ಕಾಗಿ ಕೊಲೆ ಯತ್ನ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು ಎರಡು ವರ್ಷಗಳ ಹಿಂದೆ ಮೂಡುಬಿದ್ರೆ ಪೇಟೆಯಲ್ಲಿ ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ಕಡಿದು ಹತ್ಯೆ ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನವನ್ನೂ ಸೃಷ್ಟಿ ಮಾಡಿತ್ತು.
ಜಾಹಿರಾತು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…