ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಧಾರವಾಡ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಪ್ರಹ್ಲಾದ್ ಜೋಶಿ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಶತಸಿದ್ಧ. ಇದರಲ್ಲಿ ಅನುಮಾನವೇ ಇಲ್ಲವೆಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ 5ನೇ ಬಾರಿ ಸ್ಪರ್ಧಿಸಿರುವ ಜೋಶಿ ಅವರು ಕಳೆದ ನಾಲ್ಕು ಅವಧಿಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅತ್ಯಂತ ಪರಿಶ್ರಮಿ ನಾಯಕ ಎಂದು ಬಿಎಸ್ವೈ ಬಣ್ಣಿಸಿದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕ್ಷೇತ್ರದಾದ್ಯಂತ ಅದ್ಭುತ ಅಭಿವೃದ್ಧಿ ಕಾರ್ಯಗಳನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ರೈಲ್ವೆ ಮಾರ್ಗ, ನಿಲ್ದಾಣ ಹೀಗೆ ಅನೇಕ ಮಾದರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಈಗ 5ನೇ ಬಾರಿಯೂ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಲೀಡ್ ಕೊಟ್ಟು ಜೋಶಿ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…