ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಆನೆಗಳನ್ನು ವಿಮಾನದ ಮೂಲಕ ಜಪಾನ್ಗೆ ಕಳುಹಿಸಿಕೊಡಲಾಯಿತು.
ಬನ್ನೇರುಘಟ್ಟ ಉದ್ಯಾನವನವು ಜಪಾನ್ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್ನ ಹಿಮೇಜಿ ಸೆಂಟ್ರಲ್ ಪಾರ್ಕ್ ಗೆ ಕೊಡಲಾಗುತ್ತಿದೆ.
ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತಲಾ ನಾಲ್ಕು ಚಿರತೆಗಳು, ಜಾಗ್ವಾರ್ಗಳು, ಪೂಮಾಗಳು, ಮೂರು ಚಿಂಪಾಂಜಿಗಳು ಮತ್ತು ಎಂಟು ಕ್ಯಾಪುಚಿನ್ ಕೋತಿಗಳನ್ನು ಹಸ್ತಾಂತರಿಸಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸೂರ್ಯ ಸೇನ್ ತಿಳಿಸಿದ್ದಾರೆ.
ಆನೆಗಳನ್ನು ಕ್ರಾಲ್ನಲ್ಲಿ ಇರಿಸಿ ಲಾರಿಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿಸಲಾಯಿತು. ರಾತ್ರಿ 8 ಗಂಟೆ ಸುಮಾರಿಗೆ ಕತಾರ್ ಏರ್ವೇಸ್ನ ಸರಕು ಸಾಗಣೆ ವಿಮಾನದಲ್ಲಿ ಆನೆಗಳನ್ನು ಕೊಂಡೊಯ್ಯಲಾಯಿತು.
ವಿಮಾನದಲ್ಲಿ 8 ಗಂಟೆ ಪ್ರಯಾಣ ಬೆಳೆಸಿ ಆನೆಗಳು ಜಪಾನ್ನ ಒಸಾಕಾದ ಕನ್ಸಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿವ ಅಲ್ಲಿಂದ ಹಿಮೇಜಿ ಸೆಂಟ್ರಲ್ ಪಾರ್ಕ್ ರಸ್ತೆ ಮಾರ್ಗದಲ್ಲಿ ತಲುಪಲಿವೆ. ಒಟ್ಟಾರೆ 20 ಗಂಟೆಗಳ ಕಾಲ ಪ್ರಯಾಣದ ಮೂಲಕ ಆನೆಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…