ಬೆಂಗಳೂರು: ಇವತ್ತಿನಿಂದ ನನ್ನ ಬೆಂಬಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ, ಮಂಡ್ಯ ಜಿಲ್ಲೆಗೆ ಈಗ ಬದಲಾವಣೆಯ ಅಗತ್ಯವಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರದಿಂದ ಮತ್ತು ರಾಜ್ಯದಲ್ಲಿ ಬಿಜೆಪಿಯಿಂದ ನನ್ನ ಕ್ಷೇತ್ರದ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರ ಸಿಕ್ಕಿದೆ. ಹೀಗಾಗಿ ಇಂದು ರಾಜಕೀಯದಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಪ್ರಕಟಿಸಿದ್ದಾರೆ.
ಇಂದು ಮಂಡ್ಯದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಸಂಸದೆಯಾಗಿ ಬೇರೆ ಪಕ್ಷಕ್ಕೆ ಸೇರಲು ಸಂಸದೀಯ ಕಾನೂನು ತೊಡಕುಗಳಿವೆ. ಚುನಾವಣೆಯಲ್ಲಿ ಗೆದ್ದ ಆರು ತಿಂಗಳೊಳಗೆ ಸೇರಬೇಕು. ಇಲ್ಲದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗಾಗಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಹೊರತು ಆ ಪಕ್ಷಕ್ಕೆ ಸೇರಲ್ಲ ಎಂದರು.
ನಾನು ಇರುವವರೆಗೆ ನನ್ನ ಪತಿ ಅಂಬರೀಷ್ ಹೆಸರು ಹಾಳುಮಾಡುವುದಿಲ್ಲ, ಸ್ವಾಭಿಮಾನಿಯಾಗಿಯೇ ಬದುಕುತ್ತೇನೆ. ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಾರೆ, ಬೆಂಗಳೂರಿನಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ ಎಂದೆಲ್ಲ ಬರುತ್ತಿದೆ. ನಾನು ಸಾಯುವವರೆಗೂ ಮಂಡ್ಯ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…