ಬೆಂಗಳೂರು: ಇವತ್ತಿನಿಂದ ನನ್ನ ಬೆಂಬಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ, ಮಂಡ್ಯ ಜಿಲ್ಲೆಗೆ ಈಗ ಬದಲಾವಣೆಯ ಅಗತ್ಯವಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರದಿಂದ ಮತ್ತು ರಾಜ್ಯದಲ್ಲಿ ಬಿಜೆಪಿಯಿಂದ ನನ್ನ ಕ್ಷೇತ್ರದ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರ ಸಿಕ್ಕಿದೆ. ಹೀಗಾಗಿ ಇಂದು ರಾಜಕೀಯದಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಪ್ರಕಟಿಸಿದ್ದಾರೆ.
ಇಂದು ಮಂಡ್ಯದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಸಂಸದೆಯಾಗಿ ಬೇರೆ ಪಕ್ಷಕ್ಕೆ ಸೇರಲು ಸಂಸದೀಯ ಕಾನೂನು ತೊಡಕುಗಳಿವೆ. ಚುನಾವಣೆಯಲ್ಲಿ ಗೆದ್ದ ಆರು ತಿಂಗಳೊಳಗೆ ಸೇರಬೇಕು. ಇಲ್ಲದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗಾಗಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಹೊರತು ಆ ಪಕ್ಷಕ್ಕೆ ಸೇರಲ್ಲ ಎಂದರು.
ನಾನು ಇರುವವರೆಗೆ ನನ್ನ ಪತಿ ಅಂಬರೀಷ್ ಹೆಸರು ಹಾಳುಮಾಡುವುದಿಲ್ಲ, ಸ್ವಾಭಿಮಾನಿಯಾಗಿಯೇ ಬದುಕುತ್ತೇನೆ. ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಾರೆ, ಬೆಂಗಳೂರಿನಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ ಎಂದೆಲ್ಲ ಬರುತ್ತಿದೆ. ನಾನು ಸಾಯುವವರೆಗೂ ಮಂಡ್ಯ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…