ಹಾಸನ: ರಾಜ್ಯದ ನೆರೆ ಪೀಡಿತರಿಗೆ ಕೇಂದ್ರದಿಂದ ನಯಾಪೈಸೆ ಅನುದಾನ ತರದೇ ಇರುವುದು ಸೇರಿದಂತೆ ರಾಜ್ಯ ಸರ್ಕಾರ ತನ್ನ ಅನೇಕ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪೋನ್ ಕದ್ದಾಲಿಕೆ ಪ್ರಕರಣ ತೆಗೆದು ಚುಂಚನಗಿರಿ ಶ್ರೀಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಜೆಡಿಎಸ್ ಮುಖಂಡ, ಹಿರಿಯ ಸಚಿವ ಎಚ್.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ, ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್ ಟ್ಯಾಪಿಂಗ್ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ ಟೀಕಿಸಿದರು.
ಶ್ರೀಗಳ ಪೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ, 7 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ ಖಾಲಿಯಾಗಿದ್ದ ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಸುಪುತ್ರ ವಿಜೇಂದ್ರರನ್ನು ಮುಂದೆ ಬಿಟ್ಟಿದ್ದಾರೆ. ತಂದೆ ಸೂಚನೆಯಂತೆ ವರ್ಗಾವಣೆ ದಂಧೆಯಲ್ಲಿ ನಿರತರಾಗಿರುವ ವಿಜೇಂದ್ರ, ಸ್ವಾಮೀಜಿಗಳ ಪೋನ್ ಕದ್ದಾಲಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಆದಿಚುಂಚನಗಿರಿ ಮಠಕ್ಕೆ ಒಕ್ಕಲಿಗರ ಜೊತೆ ಎಲ್ಲ ಜನಾಂಗಗಳ ಭಕ್ತರು ಇದ್ದಾರೆ. ಅವರು ಸ್ವಾಮೀಜಿಗಳ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಸ್ವಾಮೀಜಿ ಪೋನ್ ಕದ್ದಾಲಿಕೆ ಬಗ್ಗೆ ವಿಜೇಂದ್ರ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಿಜೆಪಿ ನಾಯಕರು ಮೊದಲು ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅತಿವೃಷ್ಟಿಹಾನಿಯಿಂದ ಕಷ್ಟಕ್ಕೆ ಈಡಾಗಿರುವ 12 ಜಿಲ್ಲೆಗಳ ಲಕ್ಷಾಂತರ ಕುಟುಂಬಗಳಿಗೆ ಈ ವರೆಗೂ ಕೇಂದ್ರದಿಂದ ಬಿಡಿಗಾಸು ಬಂದಿಲ್ಲ. ನೆರೆಯಿಂದ ರಾಜ್ಯದಲ್ಲಿ 35 ಸಾವಿರ ಕೋಟಿ ರು. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ಕೇಂದ್ರದಿಂದ ಹಣ ತರಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ತರದೇ ಇರುವ ಬಿಜೆಪಿಯವರಿಗೆ ಅಧಿಕಾರ ನಡೆಸಲು ನೈತಿಕತೆ ಇಲ್ಲ ಎಂದು ರೇವಣ್ಣ ಖಂಡಿಸಿದರು.
ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಅದು ಅವರಿಗೆ ತಿರುಗು ಮುರುವಾಗಲಿದೆ. ವಿಧಾನಸಭೆ ಅಧಿವೇಶನವನ್ನು ಕನಿಷ್ಠ 15 ದಿನಗಳವರೆಗೆ ನಡೆಸಬೇಕೆಂದು ಒತ್ತಾಯಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…