Featured

ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ : ಎಚ್‌.ಡಿ. ರೇವಣ್ಣ -Vishwanews24

ಹಾಸನ: ರಾಜ್ಯದ ನೆರೆ ಪೀಡಿತರಿಗೆ ಕೇಂದ್ರದಿಂದ ನಯಾಪೈಸೆ ಅನುದಾನ ತರದೇ ಇರುವುದು ಸೇರಿದಂತೆ ರಾಜ್ಯ ಸರ್ಕಾರ ತನ್ನ ಅನೇಕ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪೋನ್‌ ಕದ್ದಾಲಿಕೆ ಪ್ರಕರಣ ತೆಗೆದು ಚುಂಚನಗಿರಿ ಶ್ರೀಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಜೆಡಿಎಸ್‌ ಮುಖಂಡ, ಹಿರಿಯ ಸಚಿವ ಎಚ್‌.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ, ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್‌ ಟ್ಯಾಪಿಂಗ್‌ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ ಟೀಕಿಸಿದರು.

ಶ್ರೀಗಳ ಪೋನ್‌ ಟ್ಯಾಪಿಂಗ್‌ ಮಾಡುವ ಅಗತ್ಯವಿಲ್ಲ, 7 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ ಖಾಲಿಯಾಗಿದ್ದ ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಸುಪುತ್ರ ವಿಜೇಂದ್ರರನ್ನು ಮುಂದೆ ಬಿಟ್ಟಿದ್ದಾರೆ. ತಂದೆ ಸೂಚನೆಯಂತೆ ವರ್ಗಾವಣೆ ದಂಧೆಯಲ್ಲಿ ನಿರತರಾಗಿರುವ ವಿಜೇಂದ್ರ, ಸ್ವಾಮೀಜಿಗಳ ಪೋನ್‌ ಕದ್ದಾಲಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಆದಿಚುಂಚನಗಿರಿ ಮಠಕ್ಕೆ ಒಕ್ಕಲಿಗರ ಜೊತೆ ಎಲ್ಲ ಜನಾಂಗಗಳ ಭಕ್ತರು ಇದ್ದಾರೆ. ಅವರು ಸ್ವಾಮೀಜಿಗಳ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಸ್ವಾಮೀಜಿ ಪೋನ್‌ ಕದ್ದಾಲಿಕೆ ಬಗ್ಗೆ ವಿಜೇಂದ್ರ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಿಜೆಪಿ ನಾಯಕರು ಮೊದಲು ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅತಿವೃಷ್ಟಿಹಾನಿಯಿಂದ ಕಷ್ಟಕ್ಕೆ ಈಡಾಗಿರುವ 12 ಜಿಲ್ಲೆಗಳ ಲಕ್ಷಾಂತರ ಕುಟುಂಬಗಳಿಗೆ ಈ ವರೆಗೂ ಕೇಂದ್ರದಿಂದ ಬಿಡಿಗಾಸು ಬಂದಿಲ್ಲ. ನೆರೆಯಿಂದ ರಾಜ್ಯದಲ್ಲಿ 35 ಸಾವಿರ ಕೋಟಿ ರು. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ಕೇಂದ್ರದಿಂದ ಹಣ ತರಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ತರದೇ ಇರುವ ಬಿಜೆಪಿಯವರಿಗೆ ಅಧಿಕಾರ ನಡೆಸಲು ನೈತಿಕತೆ ಇಲ್ಲ ಎಂದು ರೇವಣ್ಣ ಖಂಡಿಸಿದರು.

ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಅದು ಅವರಿಗೆ ತಿರುಗು ಮುರುವಾಗಲಿದೆ. ವಿಧಾನಸಭೆ ಅಧಿವೇಶನವನ್ನು ಕನಿಷ್ಠ 15 ದಿನಗಳವರೆಗೆ ನಡೆಸಬೇಕೆಂದು ಒತ್ತಾಯಿಸಿದರು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago