Featured

ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ : ಎಚ್‌.ಡಿ. ರೇವಣ್ಣ -Vishwanews24

ಹಾಸನ: ರಾಜ್ಯದ ನೆರೆ ಪೀಡಿತರಿಗೆ ಕೇಂದ್ರದಿಂದ ನಯಾಪೈಸೆ ಅನುದಾನ ತರದೇ ಇರುವುದು ಸೇರಿದಂತೆ ರಾಜ್ಯ ಸರ್ಕಾರ ತನ್ನ ಅನೇಕ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪೋನ್‌ ಕದ್ದಾಲಿಕೆ ಪ್ರಕರಣ ತೆಗೆದು ಚುಂಚನಗಿರಿ ಶ್ರೀಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಜೆಡಿಎಸ್‌ ಮುಖಂಡ, ಹಿರಿಯ ಸಚಿವ ಎಚ್‌.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ, ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್‌ ಟ್ಯಾಪಿಂಗ್‌ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ ಟೀಕಿಸಿದರು.

ಶ್ರೀಗಳ ಪೋನ್‌ ಟ್ಯಾಪಿಂಗ್‌ ಮಾಡುವ ಅಗತ್ಯವಿಲ್ಲ, 7 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ ಖಾಲಿಯಾಗಿದ್ದ ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಸುಪುತ್ರ ವಿಜೇಂದ್ರರನ್ನು ಮುಂದೆ ಬಿಟ್ಟಿದ್ದಾರೆ. ತಂದೆ ಸೂಚನೆಯಂತೆ ವರ್ಗಾವಣೆ ದಂಧೆಯಲ್ಲಿ ನಿರತರಾಗಿರುವ ವಿಜೇಂದ್ರ, ಸ್ವಾಮೀಜಿಗಳ ಪೋನ್‌ ಕದ್ದಾಲಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಆದಿಚುಂಚನಗಿರಿ ಮಠಕ್ಕೆ ಒಕ್ಕಲಿಗರ ಜೊತೆ ಎಲ್ಲ ಜನಾಂಗಗಳ ಭಕ್ತರು ಇದ್ದಾರೆ. ಅವರು ಸ್ವಾಮೀಜಿಗಳ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಸ್ವಾಮೀಜಿ ಪೋನ್‌ ಕದ್ದಾಲಿಕೆ ಬಗ್ಗೆ ವಿಜೇಂದ್ರ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಿಜೆಪಿ ನಾಯಕರು ಮೊದಲು ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅತಿವೃಷ್ಟಿಹಾನಿಯಿಂದ ಕಷ್ಟಕ್ಕೆ ಈಡಾಗಿರುವ 12 ಜಿಲ್ಲೆಗಳ ಲಕ್ಷಾಂತರ ಕುಟುಂಬಗಳಿಗೆ ಈ ವರೆಗೂ ಕೇಂದ್ರದಿಂದ ಬಿಡಿಗಾಸು ಬಂದಿಲ್ಲ. ನೆರೆಯಿಂದ ರಾಜ್ಯದಲ್ಲಿ 35 ಸಾವಿರ ಕೋಟಿ ರು. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ಕೇಂದ್ರದಿಂದ ಹಣ ತರಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ತರದೇ ಇರುವ ಬಿಜೆಪಿಯವರಿಗೆ ಅಧಿಕಾರ ನಡೆಸಲು ನೈತಿಕತೆ ಇಲ್ಲ ಎಂದು ರೇವಣ್ಣ ಖಂಡಿಸಿದರು.

ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಅದು ಅವರಿಗೆ ತಿರುಗು ಮುರುವಾಗಲಿದೆ. ವಿಧಾನಸಭೆ ಅಧಿವೇಶನವನ್ನು ಕನಿಷ್ಠ 15 ದಿನಗಳವರೆಗೆ ನಡೆಸಬೇಕೆಂದು ಒತ್ತಾಯಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

22 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

40 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

49 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago