Featured

ಪ್ರಾಮಾಣಿಕ ,ಸ್ವಚ್ಚ, ದಕ್ಷ , ಪಾರದರ್ಶಕ ಪುರಸಭಾ ಸದಸ್ಯರಿಂದ – ಪುರಸಭೆಯ ಅಭಿವ್ರಧ್ದಿಯೇ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಗುರಿ:press release

ಪ್ರಾಮಾಣಿಕ ,ಸ್ವಚ್ಚ, ದಕ್ಷ , ಪಾರದರ್ಶಕ ಪುರಸಭಾ ಸದಸ್ಯರಿಂದ – ಪುರಸಭೆಯ ಅಭಿವ್ರಧ್ದಿಯೇ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಗುರಿ:press release

 

ಸೋಮವಾರ 27/12/2021 ರಂದು ಪುರಸಭಾ ಚುನಾವಣೆ ನಡೆಯಲಿದೆ. ಪ್ರಸ್ತುತ ಅಧಿಕಾರದಲ್ಲಿದ್ದ ಮತ್ತು ಚುನಾವಣೆಯಲ್ಲಿರುವ ರಾಜಕೀಯ ಪಕ್ಷ ಮತ್ತು ಪುರಸಭಾ ಸದಸ್ಯರಿಂದ ಕಾಪುವಿನ ಜನತೆಗೆ ಮೂಲಭೂತ ಸೌಲಭ್ಯ , ಭ್ರಷ್ಟಚಾರ ರಹಿತ ಆಡಳಿತ ,ಅನುದಾನಗಳನ್ನು ಸರಿಯಾದ ರೀತಿಯಲ್ಲಿ ಜನತೆಗೆ ತಲುಪಿಸುವಲ್ಲಿ ಮತ್ತು ಬಳಸುವಲ್ಲಿ ವಿಫುಲವಾಗಿದೆ .ಈ ಮೊದಲು ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಮತದಾರರ ಧ್ವನಿಯಾಗದೆ ಪಕ್ಷದ ನಾಯಕರ ದ್ವನಿಯಾಗಿದ್ದು ಮತದಾರರಿಗೆ ನೀಡಿದ ಆಶ್ವಾಸನೆ ಈಡೇರಿಸಲಾಗಲಿಲ್ಲ. .ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ತನ್ನ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅವರನ್ನು ಎರಡೂ ವಾರ್ಡಿನ ಮತದಾರರು ಗೆಲ್ಲಿಸಿದಲ್ಲಿ ಅಭ್ಯರ್ಥಿಗಳು ತಮ್ಮ ಮತದಾರರ ಧ್ವನಿಯಾಗಲಿದ್ದು, ಸರಕಾರದ ವತಿಯಿಂದ ಬರುವ ಅನುದಾನವನ್ನು ಸಮಗ್ರವಾಗಿ ಆಯಾ ವಾರ್ಡಿನ ಅಭಿವೃದ್ಧಿಗಾಗಿ ವಿನಿಯೋಗಿಸಲಿದ್ದಾರೆ. ಈ ಎಲ್ಲ ಕಾರಣಗಳಿಗಾಗಿ ಕಾಪುವಿನ ಪರಿಸರದಲ್ಲಿ ಜನಮನ್ನಣೆ ಪಡೆದ, ಸ್ವಚ್ಛ ಹಸ್ತದ, ಎಲ್ಲ ವರ್ಗಗದವರನ್ನು ಸರಿದೂಗಿಸಿ ಕೊಂಡೊಯ್ಯುವ ,ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಹಾಗೂ ಮೌಲ್ಯಕ್ಜೆ ಭದ್ದರಾಗಿದ್ದು ಪುರಸಭೆಯ ಚಟುವಟಿಕೆಗಳ ಕುರಿತು ಅಪಾರ ಅನುಭವವಿರುವ ಮತ್ತು ಅನುದಾನಗಳನ್ನು ಬಗ್ಗೆ ತಿಳುವಳಿಕೆಯುಳ್ಳ ,ಗ್ರಾಮಸ್ಧರ ಸಮಸ್ಯೆಗಳಿಗೆ ಸ್ಪಂದಿಸಲು ಸಮಯ ನೀಡಬಲ್ಲ ಇಬ್ಬರು ಪ್ರಾಮಾಣಿಕ ಅಭ್ಯರ್ಥಿಗಳನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ನಿಲ್ಲಿಸಿದೆ ಈ ಇಬ್ಬರು ಅಭ್ಯರ್ಥಿಗಳು ಅನ್ವರ್ ಅಲಿಕ ಕಾಪು ಮತ್ತು ಗುಲ್ಶನ್ ಮೊಹಮ್ಮದ್ ವಾರ್ಡಿನ ಜನಮನ್ನಣೆ ಪಡೆದವರಾಗಿದ್ದು,ವಾರ್ಡಿನ ಪರಿಸರದವರಾಗಿದ್ದು ಇವರನ್ನು ಬಹುಮತದಿಂದ ಗೆಲ್ಲಿಸಿಕೊಡಬೇಕೆಂದು ಕಾಪುವಿನ 17ನೇ ವಾರ್ಡ್ ಬಡಗರುಗುತ್ತು ಮತ್ತು 18 ನೇ ವಾರ್ಡ್ ಕೊಂಬಗುಡ್ಡೆಯ ಮತದಾರ ಬಂಧುಗಳಾದ ತಮ್ಮಲ್ಲಿ ಗೌರವಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇವೆ.

ಅಬ್ದುಲ್ ಅಝೀಝ್ ಉದ್ಯಾವರ,
ಜಿಲ್ಲಾಧ್ಯಕ್ಷರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago