ಸೋಮವಾರ 27/12/2021 ರಂದು ಪುರಸಭಾ ಚುನಾವಣೆ ನಡೆಯಲಿದೆ. ಪ್ರಸ್ತುತ ಅಧಿಕಾರದಲ್ಲಿದ್ದ ಮತ್ತು ಚುನಾವಣೆಯಲ್ಲಿರುವ ರಾಜಕೀಯ ಪಕ್ಷ ಮತ್ತು ಪುರಸಭಾ ಸದಸ್ಯರಿಂದ ಕಾಪುವಿನ ಜನತೆಗೆ ಮೂಲಭೂತ ಸೌಲಭ್ಯ , ಭ್ರಷ್ಟಚಾರ ರಹಿತ ಆಡಳಿತ ,ಅನುದಾನಗಳನ್ನು ಸರಿಯಾದ ರೀತಿಯಲ್ಲಿ ಜನತೆಗೆ ತಲುಪಿಸುವಲ್ಲಿ ಮತ್ತು ಬಳಸುವಲ್ಲಿ ವಿಫುಲವಾಗಿದೆ .ಈ ಮೊದಲು ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಮತದಾರರ ಧ್ವನಿಯಾಗದೆ ಪಕ್ಷದ ನಾಯಕರ ದ್ವನಿಯಾಗಿದ್ದು ಮತದಾರರಿಗೆ ನೀಡಿದ ಆಶ್ವಾಸನೆ ಈಡೇರಿಸಲಾಗಲಿಲ್ಲ. .ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ತನ್ನ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅವರನ್ನು ಎರಡೂ ವಾರ್ಡಿನ ಮತದಾರರು ಗೆಲ್ಲಿಸಿದಲ್ಲಿ ಅಭ್ಯರ್ಥಿಗಳು ತಮ್ಮ ಮತದಾರರ ಧ್ವನಿಯಾಗಲಿದ್ದು, ಸರಕಾರದ ವತಿಯಿಂದ ಬರುವ ಅನುದಾನವನ್ನು ಸಮಗ್ರವಾಗಿ ಆಯಾ ವಾರ್ಡಿನ ಅಭಿವೃದ್ಧಿಗಾಗಿ ವಿನಿಯೋಗಿಸಲಿದ್ದಾರೆ. ಈ ಎಲ್ಲ ಕಾರಣಗಳಿಗಾಗಿ ಕಾಪುವಿನ ಪರಿಸರದಲ್ಲಿ ಜನಮನ್ನಣೆ ಪಡೆದ, ಸ್ವಚ್ಛ ಹಸ್ತದ, ಎಲ್ಲ ವರ್ಗಗದವರನ್ನು ಸರಿದೂಗಿಸಿ ಕೊಂಡೊಯ್ಯುವ ,ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಹಾಗೂ ಮೌಲ್ಯಕ್ಜೆ ಭದ್ದರಾಗಿದ್ದು ಪುರಸಭೆಯ ಚಟುವಟಿಕೆಗಳ ಕುರಿತು ಅಪಾರ ಅನುಭವವಿರುವ ಮತ್ತು ಅನುದಾನಗಳನ್ನು ಬಗ್ಗೆ ತಿಳುವಳಿಕೆಯುಳ್ಳ ,ಗ್ರಾಮಸ್ಧರ ಸಮಸ್ಯೆಗಳಿಗೆ ಸ್ಪಂದಿಸಲು ಸಮಯ ನೀಡಬಲ್ಲ ಇಬ್ಬರು ಪ್ರಾಮಾಣಿಕ ಅಭ್ಯರ್ಥಿಗಳನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ನಿಲ್ಲಿಸಿದೆ ಈ ಇಬ್ಬರು ಅಭ್ಯರ್ಥಿಗಳು ಅನ್ವರ್ ಅಲಿಕ ಕಾಪು ಮತ್ತು ಗುಲ್ಶನ್ ಮೊಹಮ್ಮದ್ ವಾರ್ಡಿನ ಜನಮನ್ನಣೆ ಪಡೆದವರಾಗಿದ್ದು,ವಾರ್ಡಿನ ಪರಿಸರದವರಾಗಿದ್ದು ಇವರನ್ನು ಬಹುಮತದಿಂದ ಗೆಲ್ಲಿಸಿಕೊಡಬೇಕೆಂದು ಕಾಪುವಿನ 17ನೇ ವಾರ್ಡ್ ಬಡಗರುಗುತ್ತು ಮತ್ತು 18 ನೇ ವಾರ್ಡ್ ಕೊಂಬಗುಡ್ಡೆಯ ಮತದಾರ ಬಂಧುಗಳಾದ ತಮ್ಮಲ್ಲಿ ಗೌರವಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇವೆ.
ಅಬ್ದುಲ್ ಅಝೀಝ್ ಉದ್ಯಾವರ,
ಜಿಲ್ಲಾಧ್ಯಕ್ಷರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…