ಹಾಸನ: ಪ್ರೀತಿಯಲ್ಲಿ ವಿರಸ ಮೂಡಿದ ಹಿನ್ನೆಲೆಯಲ್ಲಿ ಪ್ರಿಯತಮೆಯು ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಿ.ಎಂ. ರಸ್ತೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಎದುರು ಬುಧವಾರ ರಾತ್ರಿ ನಡೆದಿದೆ.
ಇರಿತಕ್ಕೆ ಒಳಗಾಗಿರುವ ಮನುಕುಮಾರ್ (25) ಸ್ಥಿತಿ ಗಂಭೀರವಾಗಿದ್ದು ಹಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಾಲೂಕಿನ ಎ.ಗುಡುಗನ ಹಳ್ಳಿಯ ಮನುಕುಮಾರ್, ಭವಾನಿ ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರೀತಿಸುತ್ತಿದ್ದರು. ಇತ್ತೀಚೆಗೆ ವಿರಸ ಮೂಡಿತ್ತು. ಬುಧವಾರ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಹೋಟೆಲ್ಗೆ ಮನುಕುಮಾರ್ ಹೋಗಿದ್ದು ಈ ವಿಷಯ ತಿಳಿದಿದ್ದ ಭವಾನಿ, ಪ್ರಿಯಕರನಿಗೆ ಪದೇ ಪದೆ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಭವಾನಿಯೇ ಹೋಟೆಲ್ ಗೇಟ್ ಒಳಗೆ ಹೋದಾಗ ಮನುಕುಮಾರ್ ಸಿಕ್ಕಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿದ್ದಾಳೆ.
ಸದ್ಯ ಪೊಲೀಸರು ಕೊಲೆ ಯತ್ನ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…