ಹಾಸನ: ಪ್ರೀತಿಯಲ್ಲಿ ವಿರಸ ಮೂಡಿದ ಹಿನ್ನೆಲೆಯಲ್ಲಿ ಪ್ರಿಯತಮೆಯು ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಿ.ಎಂ. ರಸ್ತೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಎದುರು ಬುಧವಾರ ರಾತ್ರಿ ನಡೆದಿದೆ.
ಇರಿತಕ್ಕೆ ಒಳಗಾಗಿರುವ ಮನುಕುಮಾರ್ (25) ಸ್ಥಿತಿ ಗಂಭೀರವಾಗಿದ್ದು ಹಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಾಲೂಕಿನ ಎ.ಗುಡುಗನ ಹಳ್ಳಿಯ ಮನುಕುಮಾರ್, ಭವಾನಿ ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರೀತಿಸುತ್ತಿದ್ದರು. ಇತ್ತೀಚೆಗೆ ವಿರಸ ಮೂಡಿತ್ತು. ಬುಧವಾರ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಹೋಟೆಲ್ಗೆ ಮನುಕುಮಾರ್ ಹೋಗಿದ್ದು ಈ ವಿಷಯ ತಿಳಿದಿದ್ದ ಭವಾನಿ, ಪ್ರಿಯಕರನಿಗೆ ಪದೇ ಪದೆ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಭವಾನಿಯೇ ಹೋಟೆಲ್ ಗೇಟ್ ಒಳಗೆ ಹೋದಾಗ ಮನುಕುಮಾರ್ ಸಿಕ್ಕಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿದ್ದಾಳೆ.
ಸದ್ಯ ಪೊಲೀಸರು ಕೊಲೆ ಯತ್ನ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…