Featured

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ – vishwanews24

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ

ಗದಗ : ಪ್ರಿಯಕರನ ಬ್ಲಾಕ್‌ಮೇಲ್ ನಿಂದಾಗಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಗೆ 8 ದಿನ ಬಾಕಿ ಇರುವಾಗಲೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಸೈರಾ ಬಾನು ನದಾಫ್‌ (29) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ರವಿವಾರ ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಹೋಗಿದ್ದ ಸಂದರ್ಭ, ಸೈರಾಬಾನು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಳೆದ ಐದು ವರ್ಷಗಳಿಂದ ಮೈಲೇರಿ ಎಂಬಾತನನ್ನ ಪ್ರೀತಿ ಮಾಡುತಿದ್ದ ಈಕೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಬಳಿಕ ಮದುವೆಗೆ ಒಪ್ಪಿಕೊಂಡಿದ್ದಳು. ಆದರೆ ಶಿಕ್ಷಕಿಯ ಮದುವೆ ತಯಾರಿ ನೋಡಿ ಲವರ್ ನಿಂದ ಉಪಟಳ ಶುರುವಾಗಿದೆಯಂತೆ. ಇಬ್ಬರ ಫೋಟೋ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕ್ತಿದ್ದ ಅಂತ ಸ್ವತ: ಸೈರಾಬಾನು ತನ್ನ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾಳೆ. ಹೀಗಾಗಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾಳೆ ಎಂದು ಪಾಲಕರು ಆರೋಪಿಸಿದ್ದಾರೆ.

ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೈರಾ ಬಾನು, ನ್ಯಾಷನಲ್ ಲೆವೆಲ್ ಕುಸ್ತಿಪಟು ಆಗಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಳು. ಇಡೀ ಮನೆಯ ಜವಾಬ್ದಾರಿ ಹೊತ್ತು ಸಾಗುತ್ತಿದ್ದ ಸೈರಾಬಾನು ಲವರ್ ಟಾರ್ಚರ್ ಗೆ ಬೇಸತ್ತು ಆತಮಹತ್ಯೆ ಮಾಡಿಕೊಂಡಿದ್ದಾಳೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago