ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ವೈರಲ್ ಆಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಮೆಸೇಜ್ನಲ್ಲಿ ಏನಿದೆ?
ಮನುಕುಮಾರ್ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
ಚಾಕು ಇರಿತ ಕೇಸ್ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.
ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…