ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ವೈರಲ್ ಆಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಮೆಸೇಜ್ನಲ್ಲಿ ಏನಿದೆ?
ಮನುಕುಮಾರ್ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
ಚಾಕು ಇರಿತ ಕೇಸ್ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.
ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…