ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ವೈರಲ್ ಆಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಮೆಸೇಜ್ನಲ್ಲಿ ಏನಿದೆ?
ಮನುಕುಮಾರ್ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
ಚಾಕು ಇರಿತ ಕೇಸ್ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.
ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…