ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ವೈರಲ್ ಆಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಮೆಸೇಜ್ನಲ್ಲಿ ಏನಿದೆ?
ಮನುಕುಮಾರ್ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
ಚಾಕು ಇರಿತ ಕೇಸ್ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.
ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…