ಬೆಂಗಳೂರು: ಪ್ರಿಯಕರ ಮಾಡಿದ ಚಾಲೆಂಜ್ಗೆ ಪ್ರೇಯಸಿಯೊಬ್ಬಳು ವಿಷ ಕುಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದಲ್ಲಿ ನಡೆದಿದೆ. ಕಳೆದ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹರೀಶ್(20) ಚಾಲೆಂಜ್ ಮಾಡಿದ ಪ್ರಿಯಕರನಾಗಿದ್ದು, ದಿವ್ಯ (19) ಸಾವನ್ನಪ್ಪಿದ್ದ ಪ್ರೇಯಸಿ. ದಿವ್ಯ ಸಾವನ್ನಪ್ಪಿದ ವಿಷಯ ತಿಳಿದು ಇತ್ತ ಆರೋಪಿ ಹರೀಶ್ ಪರಾರಿಯಾಗಿದ್ದಾನೆ.
ಪ್ರಿಯಕರ ಹರೀಶ್ ಮತ್ತು ದಿವ್ಯ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಒಂದು ದಿನ ಇಬ್ಬರು ಭೇಟಿಯಾಗಿದ್ದು, ಈ ವೇಳೆ ನನ್ನ ಮೇಲೆ ನಿನಗೆ ನಿಜವಾದ ಪ್ರೀತಿ ಇದ್ದರೆ ವಿಷ ಕುಡಿ ಎಂದು ಹರೀಶ್ ಚಾಲೆಂಜ್ ಮಾಡಿದ್ದಾನೆ. ದಿವ್ಯ ಪ್ರಿಯಕರನ ಮಾತನ್ನು ನಂಬಿ ವಿಷ ಕುಡಿದ್ದಾಳೆ.
ಮನೆಗೆ ಹೋದ ಬಳಿಕ ದಿವ್ಯ ವಾಂತಿ ಮಾಡಲು ಶುರು ಮಾಡಿದ್ದಾಳೆ. ತಕ್ಷಣ ಆಕೆಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಒಂದು ದಿನದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ದಿವ್ಯ ಮೃತಪಟ್ಟಿದ್ದಾಳೆ.
ಸದ್ಯಕ್ಕೆ ಪ್ರಿಯಕರ ಹರೀಶ್ ವಿರುದ್ಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಾಹೀರಾತುಗಳು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…