ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:
ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.
ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.
ಇದನ್ನೂ ಓದಿ:
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…