Featured

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ  ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 

ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್‌ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು‌. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್‌ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.

ಇದನ್ನೂ ಓದಿ: 

ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

6 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

9 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

9 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago