ಮಂಗಳೂರು, : ಯುವಕನೋರ್ವ ತಾನು ಪ್ರೀತಿಸುತ್ತಿದ್ದ ಯುವತಿಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮೂಡಬಿದ್ರೆಯ ಪ್ರಾಂತ್ಯ ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಜಾಲ್ ಮೂಲದ ಯುವಕ ಲೋಹಿತ್ (26) ಹಾಗೂ ಚರಿಷ್ಮಾ (22) ಕಳೆದ ಕೆಲವು ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮೂಡಬಿದ್ರೆ ಬಳಿಯ ಪ್ರಾಂತ್ಯ ನಿವಾಸಿಯಾದ ಚರಿಷ್ಮಾ ಅವರ ಮನೆಗೆ ಲೋಹಿತ್ ಆಗಾಗ ಬರುತ್ತಿದ್ದ ಎಂದು ಹೇಳಲಾಗಿದೆ.
ಚರಿಷ್ಮಾ ಮಂಗಳೂರಿನ ಡ್ಯಾನ್ಸ್ ತಂಡವೊಂದರ ಸದಸ್ಯೆಯಾಗಿದ್ದಳು. ಆದರೆ ಇತ್ತೀಚೆಗೆ ಚರಿಷ್ಮಾ ಹಾಗೂ ಲೋಹಿತ್ ನಡುವೆ ಕೆಲ ವಿಚಾರದಲ್ಲಿ ಮನಸ್ತಾಪ ಹೆಚ್ಚಾಗಿ ಜಗಳವಾಡಿಕೊಂಡಿದ್ದರು.
ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಲೋಹಿತ್ ಆಕೆಯ ಮನೆಗೆ ನುಗ್ಗಿ ಚೂರಿಯಿಂದ ಇರಿದು, ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಆ ಬಳಿಕ ಆಕೆಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಇತ್ತ ಪ್ರಿಯತಮನ ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಮೂಡಬಿದ್ರೆ ಆಸ್ಪತ್ರೆಗೆ ದಾಖಲಾಯಿಸತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಗಂಭೀರ ಪರಿಸ್ಥಿತಿಯಲ್ಲಿ ನರಳಾಡುತ್ತಿದ್ದ ಚರಿಷ್ಮಾ ಹಾಗೂ ಲೋಹಿತ್ ನನ್ನು ಸ್ಥಳೀಯರು ಆತ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]