ಲಕ್ನೋ : ಸಹೋದರಿ ಪ್ರಿಯಾಂಕಾ ಅವರು ವಾರಣಾಸಿಯಿಂದ ಲೋಕಸಭೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಎರಡರಿಂದ ಮೂರು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಯ್ಬರೇಲಿ ನಡೆದ ಕೃತಜ್ಞತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಾರಣಾಸಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮೋದಿ ಅವರ ಅವರ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ ಎಂದು ತಿಳಿಸಿದರು.
ಹಿಂಸಾಚಾರ ಮತ್ತು ದ್ವೇಷದ ರಾಜಕಾರಣದಲ್ಲಿ ಬಹಿರಂಗವಾಗಿ ತೊಡಗಿರುವ ಪ್ರಧಾನಿಗೆ ಉತ್ತರ ಪ್ರದೇಶದ ಜನರು ಉತ್ತರ ನೀಡಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಕಾಂಗ್ರೆಸ್ ಪಕ್ಷವು ರಾಯ್ಬರೇಲಿ, ಅಮೇಥಿ ಸೇರಿದಂತೆ ಉತ್ತರ ಪ್ರದೇಶ ಮತ್ತು ಭಾರತದಾದ್ಯಂತ ಒಗ್ಗಟ್ಟಿನಿಂದ ಹೋರಾಡಿದೆ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣೆಯನ್ನು ಎದುರಿಸಿದ್ದರಿಂದ ಈ ಗೆಲುವು ಸಿಕ್ಕಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಮಿಳುನಾಡು, ಉತ್ತರ ಪ್ರದೇಶ, ಮಣಿಪುರ, ರಾಜಸ್ಥಾನ, ಕರ್ನಾಟಕ, ತೆಲಂಗಾಣ ಸೇರಿದಂತೆ ಈ ಚುನಾವಣೆಯಲ್ಲಿ ದೇಶದ ಪ್ರತಿಯೊಂದು ರಾಜ್ಯವೂ ಒಗ್ಗೂಡಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಭಾರತದ ಅಡಿಪಾಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ದೇಶಕ್ಕೆ ಗೊತ್ತಾಗಿದೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…