ಲಕ್ನೋ : ಸಹೋದರಿ ಪ್ರಿಯಾಂಕಾ ಅವರು ವಾರಣಾಸಿಯಿಂದ ಲೋಕಸಭೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಎರಡರಿಂದ ಮೂರು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಯ್ಬರೇಲಿ ನಡೆದ ಕೃತಜ್ಞತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಾರಣಾಸಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮೋದಿ ಅವರ ಅವರ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ ಎಂದು ತಿಳಿಸಿದರು.
ಹಿಂಸಾಚಾರ ಮತ್ತು ದ್ವೇಷದ ರಾಜಕಾರಣದಲ್ಲಿ ಬಹಿರಂಗವಾಗಿ ತೊಡಗಿರುವ ಪ್ರಧಾನಿಗೆ ಉತ್ತರ ಪ್ರದೇಶದ ಜನರು ಉತ್ತರ ನೀಡಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಕಾಂಗ್ರೆಸ್ ಪಕ್ಷವು ರಾಯ್ಬರೇಲಿ, ಅಮೇಥಿ ಸೇರಿದಂತೆ ಉತ್ತರ ಪ್ರದೇಶ ಮತ್ತು ಭಾರತದಾದ್ಯಂತ ಒಗ್ಗಟ್ಟಿನಿಂದ ಹೋರಾಡಿದೆ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣೆಯನ್ನು ಎದುರಿಸಿದ್ದರಿಂದ ಈ ಗೆಲುವು ಸಿಕ್ಕಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಮಿಳುನಾಡು, ಉತ್ತರ ಪ್ರದೇಶ, ಮಣಿಪುರ, ರಾಜಸ್ಥಾನ, ಕರ್ನಾಟಕ, ತೆಲಂಗಾಣ ಸೇರಿದಂತೆ ಈ ಚುನಾವಣೆಯಲ್ಲಿ ದೇಶದ ಪ್ರತಿಯೊಂದು ರಾಜ್ಯವೂ ಒಗ್ಗೂಡಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಭಾರತದ ಅಡಿಪಾಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ದೇಶಕ್ಕೆ ಗೊತ್ತಾಗಿದೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…