ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24
ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ
ಕಲಬುರ್ಗಿ : ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹೈದರಾಬಾದ್ನಲ್ಲಿ ಭಾನುವಾರ ತಡರಾತ್ರಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆಯಲಾಗಿದೆ.
ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ‘ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ರೆಡಿ’ ಎಂದು ಮಣಿಕಂಠ ರಾಠೋಡ ಅವರು ಈಚೆಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿತ್ತು.
ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24
ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಹೈದರಾಬಾದ್ನಲ್ಲಿ ಇರುವ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
