ವಿಜಯಪುರ: ಬಸ್ನಲ್ಲಿ ಶುರುವಾದ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕಳ್ಳಕವಟಗಿ ಗ್ರಾಮದಲ್ಲಿ ನಡೆದಿದೆ. ಪ್ರೀತಿಗಾಗಿ ವಿಷ ಕುಡಿದ ಪ್ರೇಯಸಿ, ಅದೇ ವಿಷವನ್ನ ಪ್ರಿಯಕರನಿಗೆ ಕುಡಿಸಿ ಯುವತಿ ಮನೆಯವರು ಕೊಂದಿದ್ದಾರೆ. ಪ್ರೀತಿ, ಪ್ರೇಮ, ಸೂಸೈಡ್ ಆಂಡ್ ಮರ್ಡರ್ ಕಥೆ ಇದಾಗಿದೆ.
ಯುವ ಪ್ರೇಮಿಗಳಿಬ್ಬರೂ ಪ್ರೀತಿಗಾಗಿ ಬಲಿಯಾಗಿದ್ದಾರೆ. ಪ್ರಿಯತಮನಿಗೋಸ್ಕರ ಪ್ರಿಯತಮೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮಗಳ ಸಾವಿಗೆ ಕಾರಣನಾದ ಎಂದು ಯುವತಿಯ ಪ್ರೇಮಿಯನ್ನು ಯುವತಿಯ ತಂದೆ ಕೊಂದಿದ್ದಾನೆ. ಇಬ್ಬರ ಶವಗಳನ್ನು ಪ್ರತ್ಯೇಕ ಚೀಲಗಳಲ್ಲಿ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ ಯುವತಿ ಮನೆಯವರು.ಈ ಸಂಬಂಧ ಬಾಗಲಕೋಟೆ ಜಿಲ್ಲೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 22ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ.
ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕಳ್ಳಕವಟಗಿಯ ಅಪ್ರಾಪ್ತೆ ಹಾಗೂ ಘೊಣಸಗಿಯ ಮಲ್ಲು ಜಮಖಂಡಿ ಮಧ್ಯೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮಲ್ಲು ಜಮಖಂಡಿ ಹಾಗೂ ಅಪ್ರಾಪ್ತೆ ಇಬ್ಬರೂ ಒಂದೇ ಬಸ್ನಲ್ಲಿ ವಿಜಯಪುರದ ಕಾಲೇಜಿಗೆ ಬರುತ್ತಿದ್ದರು. ಅಕ್ಕಪಕ್ಕದ ಊರಿನವರಾದ ಇವರಿಗೆ ಬಸ್ನಲ್ಲಿ ಪರಿಚಯವಾಗಿ ಫೋನ್ನಲ್ಲಿ ಲವ್ ಆಗಿತ್ತು. ಆ ಬಳಿಕ ಎಲ್ಲೆಂದರಲ್ಲಿ ಸ್ವಚ್ಚಂದವಾಗಿ ಪ್ರೇಮಿಗಳು ವಿಹರಿಸಿದ್ದರು.
ಬಳಿಕ ಈ ವಿಚಾರ ಹುಡುಗಿ ಮನೆಯವರಿಗೆ ಗೊತ್ತಾಗಿ ದೊಡ್ಡ ಗಲಾಟೆಯಾಗಿತ್ತು. ಅದಾದ ಬಳಿಕ ಎರಡೂ ಮನೆಯವರು ಇಬ್ಬರನ್ನೂ ಬೇರೆ ಬೇರೆ ಮಾಡಿದ್ದರು. ಆದ್ರೂ ಸಹ ಸೆ. 22ರಾತ್ರಿ ಕರೆ ಮಾಡಿದ್ದ ಹುಡುಗಿ ಮಲ್ಲುನನ್ನು ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಇಬ್ಬರು ಏಕಾಂತದಲ್ಲಿದ್ದಾಗ ಹುಡುಗಿ ತಂದೆ ಗುರಪ್ಪನ ಕೈಗೆ ಸಿಕ್ಕಿಹಾಕಿಕೊಂಡಿದ್ದರು. ಆಗ ಇಬ್ಬರಿಗೂ ಬುದ್ದಿ ಹೇಳಿದ್ದ ತಂದೆಯ ಮಾತು ಕೇಳದೆ ಆತುರದಲ್ಲಿ ವಿಷ ಕುಡಿದು ಅಪ್ರಾಪ್ತ ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ನನ್ನ ಮಗಳ ಸಾವಿಗೆ ಕಾರಣವಾದ ಪ್ರೇಮಿ ಮಲ್ಲುನನ್ನು ಬಿಡಬಾರದು ಅಂತ ಕೈಕಾಲು ಕಟ್ಟಿ ಅದೇ ವಿಷವನ್ನು ಯುವಕನಿಗೆ ಕುಡಿಸಿ ಕೊಲೆ ಮಾಡಲಾಗಿತ್ತು.
ನಂತರದಲ್ಲಿ ಯುವಕ ಹಾಗೂ ಯುವತಿಯ ಇಬ್ಬರ ಶವವನ್ನು ಪ್ರತ್ಯೇಕವಾಗಿ ಚೀಲದಲ್ಲಿ ಹಾಕಿ ಕೃಷ್ಣಾ ನದಿಗೆ ಎಸೆಯಲಾಗಿತ್ತು. ಇದೀಗ ಯುವಕ ಮಲ್ಲುವಿನ ಮೃತದೇಹ ಪತ್ತೆಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ಶವ ಸಿಕ್ಕಿರುವುದರಿಂದ ಬೀಳಗಿ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಗುರಪ್ಪ ಹಾಗೂ ಆತನ ಅಳಿಯ ಅಜಿತ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಯುವತಿಯ ಶವಕ್ಕಾಗಿ ಪೊಲೀಸರ ಶೋಧಕಾರ್ಯ ಮುಂದುವರೆದಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…