ರಾಮನಗರ: ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಕಾರಣ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಯುವತಿ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ಬುಧವಾರ ನಡೆದಿದೆ.
ರಾಜಣ್ಣ ಪುತ್ರ ಯಶವಂತ್ (24) ಮೃತ ಯುವಕ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದನು. ಅದೇ ಬೀದಿಯ ಯುವತಿ ಮೋನಿಕಾ ಚಾಕು ಇರಿದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲ ವರ್ಷಗಳಿಂದ ಯಶವಂತ್ ಮತ್ತು ಮೋನಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ಗೊತ್ತಾದಾಗ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಯುವಕನ ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ಯಶವಂತ್ ಮನೆಯಲ್ಲಿಯೇ ತನ್ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ.
ಬಾಗಿಲು ಮುರಿದು ಆತನನ್ನು ಕೆಳಕ್ಕಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಕೊನೆಯುಸಿರೆಳೆದಿದ್ದನು. ಶವವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದೆ.
ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಮನೆಯಲ್ಲಿದ್ದ ಮೋನಿಕಾ ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಕುಟುಂಬದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…