ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜುಲೈ 7 ಮತ್ತು 8 ರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮವನ್ನು ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ಪ್ರಕರಣದ ಬೆನ್ನುಹಚ್ಚಿದ ಪೊಲೀಸರು ಇದೀಗ ಬಾಲಾಪರಾಧಿಯನ್ನು ಬಂಧಿಸಿದ್ದಾರೆ. ತನ್ನ ಸ್ವಂತ ತಂದೆ ತಾಯಿ ಹಾಗೂ ಸಹೋದರ ಕತ್ತು ಸೀಳಲು ಬಳಸಿದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ . ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಹತ್ಯೆ ಮಾಡಿದ್ದಾನೆ.
ಕೆಲ ದಿನಗಳ ಹಿಒಂದೆಯೇ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ. ಅಪರಾಧ ಮಾಡಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾಕುವನ್ನು ಬಚ್ಚಿಟ್ಟು ಹತ್ತಿರದ ಮದುವೆಯ ಪೂರ್ವ ಸಮಾರಂಭದಲ್ಲಿಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊಂದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಪೊಲೀಸ್ ವಿಚಾರಣೆ ವೇಳೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…