ಒಡಿಶಾ: ಪ್ರೀತಿಸಿದಾಕೆಯನ್ನು ವಿವಾಹವಾಗಲು ಇಷ್ಟವಿಲ್ಲದ್ದಕ್ಕೆ ಆಕೆಯನ್ನು ಪ್ರೇಮಿಯೊಬ್ಬ 49 ಬಾರಿ ಇರಿದು ಹತ್ಯೆ ಮಾಡಿದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಜಗನ್ನಾಥ ಗೋಡಾ ಹತ್ಯೆ ಆರೋಪಿ. ಕುಣಿದಾರ್ ಸೀಮಾದಾಸ್ ಕೊಲೆಯಾದಾಕೆ. ಜಗನ್ನಾಥ ಮತ್ತು ಸೀಮಾದಾಸ್ ಪ್ರೀತಿಸುತ್ತಿದ್ದರು. ಆದರೆ ಆಕೆಯನ್ನು ವಿವಾಹವಾಗಲು ಆತನಿಗೆ ಇಚ್ಚೆ ಇರಲಿಲ್ಲ..ಈ ಕಾರಣಕ್ಕಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೈಯಲು ಈತ ಮೊದಲೇ ಯೋಜನೆ ರೂಪಿಸಿ ಗುಜರಾತ್ ಗೆ ಯುವತಿಯನ್ನು ಕರೆದೊಯ್ದಿದ್ದ. ಬಳಿಕ ಸ್ಥಳವೊಂದರಲ್ಲಿ ಆಕೆಗೆ 49 ಬಾರಿ ಮನಬಂದಂತೆ ಇರಿದಿದ್ದು, ಬಳಿಕ ನಿರ್ಜನ ಪ್ರದೇಶದ ಗದ್ದೆಯಲ್ಲಿ ಮೃತದೇಹವನ್ನು ಇರಿದು ಹೋಗಿದ್ದಾನೆ.
ಯುವತಿ ಕೊಲೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಮೃತದೇಹದಲ್ಲಿದ್ದ ಟಿ ಶರ್ಟ್ ಆಧರಿಸಿ ಆರೋಪಿಯನ್ನು ಹುಡುಕಾಡಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…