ಒಡಿಶಾ: ಪ್ರೀತಿಸಿದಾಕೆಯನ್ನು ವಿವಾಹವಾಗಲು ಇಷ್ಟವಿಲ್ಲದ್ದಕ್ಕೆ ಆಕೆಯನ್ನು ಪ್ರೇಮಿಯೊಬ್ಬ 49 ಬಾರಿ ಇರಿದು ಹತ್ಯೆ ಮಾಡಿದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಜಗನ್ನಾಥ ಗೋಡಾ ಹತ್ಯೆ ಆರೋಪಿ. ಕುಣಿದಾರ್ ಸೀಮಾದಾಸ್ ಕೊಲೆಯಾದಾಕೆ. ಜಗನ್ನಾಥ ಮತ್ತು ಸೀಮಾದಾಸ್ ಪ್ರೀತಿಸುತ್ತಿದ್ದರು. ಆದರೆ ಆಕೆಯನ್ನು ವಿವಾಹವಾಗಲು ಆತನಿಗೆ ಇಚ್ಚೆ ಇರಲಿಲ್ಲ..ಈ ಕಾರಣಕ್ಕಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೈಯಲು ಈತ ಮೊದಲೇ ಯೋಜನೆ ರೂಪಿಸಿ ಗುಜರಾತ್ ಗೆ ಯುವತಿಯನ್ನು ಕರೆದೊಯ್ದಿದ್ದ. ಬಳಿಕ ಸ್ಥಳವೊಂದರಲ್ಲಿ ಆಕೆಗೆ 49 ಬಾರಿ ಮನಬಂದಂತೆ ಇರಿದಿದ್ದು, ಬಳಿಕ ನಿರ್ಜನ ಪ್ರದೇಶದ ಗದ್ದೆಯಲ್ಲಿ ಮೃತದೇಹವನ್ನು ಇರಿದು ಹೋಗಿದ್ದಾನೆ.
ಯುವತಿ ಕೊಲೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಮೃತದೇಹದಲ್ಲಿದ್ದ ಟಿ ಶರ್ಟ್ ಆಧರಿಸಿ ಆರೋಪಿಯನ್ನು ಹುಡುಕಾಡಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…